ಕಾರವಾರ (28 october 2025) :- ಖಾಸಗಿ ಬಸ್ ನಲ್ಲಿ ದಾಖಲೆ ಇಲ್ಲದೆ ಗೋವಾ (goa)ದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಒಂದು ಕೋಟಿ ಹಣ ವಶಕ್ಕೆ ಪಡೆದು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ-ಗೋವಾ ಗಡಿಯ ಮಾಜಾಳಿ ಚಕ್ ಪೋಸ್ಟ್ ಬಳಿ ನಡೆದಿದೆ.

ಗೋವಾದಿಂದ(goa) ಬೆಂಗಳೂರಿನ ಹೊಸೂರಿಗೆ ಸಾಗಾಟ ಮಾಡಲಾಗುತಿದ್ದು , ಚಕ್ ಪೋಸ್ಟ್ ಬಳಿ ಪೊಲೀಸರು ತಪಾಸಣೆ ನಡೆಸುವ ವೇಳೆ ಚೀಲದಲ್ಲಿ ಹಣ ಪತ್ತೆಯಾಗಿದೆ. ಹಣದ ಸಂಬಂಧ ದಾಖಲೆ ಕೇಳಿದಾಗ ದಾಖಲೆ ನೀಡದ ಕಾರಣ ಬೆಂಗಳೂರು ಮೂಲದ ಕಲ್ಪೇಶದ , ರಾಜಸ್ಥಾನ ಮೂಲದ ಬಮರ ರಾಮ್ ಎಂಬಇಬ್ಬರನ್ನು ವಶಕ್ಕೆ ಪಡೆದು ತನಿಖೆ ಕೈಕೊಳ್ಳಲಾಗಿದೆ.

ಇನ್ನು ಪ್ರಾಥಮಿಕ ಮಾಹಿತಿ ಪ್ರಕಾರ ಬೆಂಗಳೂರಿನ ಕಲ್ಲೇಶ್ ಹಾಗೂ ಬಮರ ರಾಮ್ ಗೋವಾದ ಬೇರೆಯೊಬ್ಬರ ಹಣವನ್ನು ವ್ಯವಹಾರಕ್ಕಾಗಿ ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ಹೇಳಿದ್ದಾನೆ. ಆದರೇ ಈ ಹಣದ ಮೂಲ,ದಾಖಲೆಗಳನ್ನು ಪೊಲೀಸರು ಕೇಳಿದಾಗ ನೀಡಿಲ್ಲ. ಈ ಹಿನ್ನಲೆಯಲ್ಲಿ ಚಿತ್ತಾಕುಲ ಪೊಲೀಸರು ಹಣವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಇನ್ನು ಕಲ್ಲೇಶ್ ಹಣ ಸಾಗಾಟ ವ್ಯವಹಾರ ಮಾಡುವ ಬಗ್ಗೆ ಮಾಹಿತಿ ಲಭಿಸಿದ್ದು, ಈ ಹಣ ಹವಾಲಾದ್ದೋ ಅಥವಾ ಇನ್ಯಾವುದೋ ಎಂಬ ಬಗ್ಗೆ ತಿಳಿದು ಬರಬೇಕಿದೆ








